ಬಸವನಗುಡಿ ಬಳಿಯ ಕೆಂಪೇಗೌಡ ಆಟದ ಮೈದಾನದಲ್ಲಿ ಹಮ್ಮಿಕೊಂಡಿದ್ದ ಅಭಯಾಕ್ಷರ- ಹಾಲುಹಬ್ಬ ಉತ್ಸವದಲ್ಲಿ ಅವರು ಆಶೀರ್ವಚನ ನೀಡಿದರು. ಮನೆಯಲ್ಲಿ ಗೋಪಾಲನೆ, ಅದು ಸಾಧ್ಯವಾಗದಿದ್ದರೆ ಗೋಪಾಲನೆಗೆ ನೆರವು ನೀಡುವುದು ಅಥವಾ ಗೋಧನದ ಹುಂಡಿ ಇಡುವುದು, ಗವ್ಯೋತ್ಪನ್ನ ಬಳಕೆ, ಗೋವಧೆಯಿಂದ ಬರುವ ಉತ್ಪನ್ನಗಳನ್ನು ತಿರಸ್ಕರಿಸುವ, ಗೋಕಿಂಕರರಾಗಿ ಸೇವೆ ಸಲ್ಲಿಸುವ ಮೂಲಕ ಅಥವಾ ಅಭಯಾಕ್ಷರಕ್ಕೆ ಸಹಿ ಮಾಡುವ ಸಪ್ತಸೂತ್ರಗಳ ಮೂಲಕ ಗೋರಕ್ಷಣೆಗೆ ಮುಂದಾಗಬೇಕು ಎಂದು ಕರೆ ನೀಡಿದರು.